ಕವಿ ಪರಿಚಯ - ಪಂಪ

 

ಪಂಪ:ಕವಿ-ಕೃತಿ ಪರಿಚಯ


  • ಪಂಪನ ಜನನ : ಕ್ರಿ.ಶ. ೯೦೨, ದುಂದುಭಿ ಸಂವತ್ಸರ
  • ತಂದೆ : ಅಭಿರಾಮ ದೇವರಾಯ (ರೂಢಿಯ ಹೆಸರು:ಭೀಮಪ್ಪಯ್ಯ.)
  • ತಾಯಿ: ಅಬ್ಬಣಬ್ಬೆ (ಬೆಳ್ವೊಲದಣ್ಣಿಗೆರೆಯ ಜೋಯಿಸ ಸಿಂಘನಮೊಮ್ಮಗಳು)
  • ಮಾಧವ ಸೋಮಯಾಜಿ:->ಅಭಿಮಾನ ಚಂದ್ರ -> ಕೊಮರಯ್ಯ (ಈ ಮೂವರೂ ಬ್ರಾಹ್ಮಣರು) -> ಅಭಿರಾಮ ದೇವರಾಯ (ಜೈನಮತಕ್ಕೆ ಸೇರಿದನು) -> ಪಂಪ (ಜೈನ) [೧]
  • ಜನ್ಮಸ್ಥಳ : ವೆಂಗಿ ಪುಳುಪು, ವೆಂಗಿ ಮಂಡಳ (ಆಂಧ್ರ), ವೇಮಲವಾಡ,ರಾಜಮಂಡ್ರಿಜಿಲ್ಲೆ (ವೆಂಗಿಪಳು ಎಂಬ ಅಗ್ರಹಾರ)
  • ಗುರು : ದೇವೇಂದ್ರಮುನಿ
  • ವಿದ್ಯಾಭ್ಯಾಸ :ಗಣಿತ, ವ್ಯಾಕರಣ,ಅಲಂಕಾರ, ಸಂಗೀತ, ನಾಟ್ಯ, ಶಿಲ್ಪ, ವೈದ್ಯ, ವೇದಶಾಸ್ತ್ರವನ್ನು ಗುರುಕುಲದಲ್ಲಿ ಅಭ್ಯಾಸ ಮಾಡಿದ್ದನು. ದೇವೇಂದ್ರ ಮುನೀಂದ್ರಈತನ ಗುರುಗಳು.
  • ವೃತ್ತಿ: ವೆಂಗಿ ಚಾಲುಕ್ಯವಂಶದ ಎರಡನೆಯ ಅರಿಕೇಸರಿಯ ಆಸ್ಥಾನ ಪಂಡಿತ.




ಸಾಹಿತ್ಯ ಕೃತಿಗಳು

  • ಆದಿಪುರಾಣ-ಮೊದಲನೆಯ ತೀರ್ಥಂಕರನಾದ ಪುರದೇವ/ವೃಷಭದೇವನ ಬಗ್ಗೆ ರಚಿತವಾದ ಜೈನಕಾವ್ಯ. ಜಿನಸೇನಾಚಾರ್ಯರಸಂಸ್ಕೃತಕಾವ್ಯ ಪೂರ್ವಪುರಾಣ ಇದರ ಆಕರ ಗ್ರಂಥ. ಇದರಲ್ಲಿ ೧೬ಆಶ್ವಾಸಗಳು ಮತ್ತು ೧೫೫೫ ಪದ್ಯಗಳೂ ಇವೆ. ಇದರಲ್ಲಿ ಪ್ರಮುಖವಾಗಿಆದಿತೀರ್ಥಂಕರನಾದ ವೃಷಭದೇವ ಮತ್ತು ಅವನ ಮಕ್ಕಳಾದ ಭರತ ಮತ್ತು ಬಾಹುಬಲಿಗಳ ಪ್ರಸಂಗವು ಚಿತ್ರಿತವಾಗಿದೆ ಹಾಗೂ ಜೈನಧರ್ಮದ ವರ್ಣನೆಯ ಜೊತೆಗೆ ಸರ್ವಧರ್ಮದ ಸಮನ್ವಯವನ್ನು ಮೆರೆದಿದ್ದಾನೆ.
  • ವಿಕ್ರಮಾರ್ಜುನ ವಿಜಯ-ಪಂಪಭಾರತವೆಂದೇ ಪ್ರಸಿದ್ಧಿ. ಇದರಲ್ಲಿವ್ಯಾಸರಚಿತವಾದ ಮಹಾಭಾರತವನ್ನು ಕನ್ನಡಕ್ಕೆ ತಂದ ಕೀರ್ತಿ ಪಂಪನಿಗೆ ಸಲ್ಲುತ್ತದೆ. ಪಂಪ ಭಾರತದಲ್ಲಿ ಅರ್ಜುನನನ್ನು ಪ್ರಧಾನ ಭೂಮಿಕೆಯಲ್ಲಿ ನಿಲ್ಲಿಸಿ ತನ್ನ ದೊರೆ ಅರಿಕೇಸರಿಗೆ ಹೋಲಿಸಿದ್ದಾನೆ. ಮಹಾಭಾರತದ ಕಾವ್ಯದ ವರ್ಣನೆಯ ಜೊತೆಗೆ ಪಂಪ ತನ್ನ ಕಾಲದ ಸಮಾಜದ ನಾಗರೀಕತೆ, ಸಂಪ್ರದಾಯ, ಸಂಸ್ಕೃತಿ ಹಾಗೂ ಜನ ಸಾಮನ್ಯರ ಜೀವನದ ಪೂರ್ಣ ಚಿತ್ರಣನೀಡಿದ್ದಾನೆ. ಅಂದಿನ ಕಾಲದ ಆಟಗಳು, ವಿದ್ಯಾಭ್ಯಾಸ ಪದ್ಧತಿ, ಜನರ ವಿಲಾಸಿಜೀವನ, ಪ್ರಕೃತಿ ಸೌಂದರ್ಯವನ್ನು ಸೊಗಸಾಗಿ ಚಿತ್ರಿಸಿದ್ದಾನೆ.

ಪ್ರಶಸ್ತಿ, ಪುರಸ್ಕಾರ, ಬಿರುದು:

  • ಸಂಸಾರ ಸಾರೋದಯ, ಸರಸ್ವತೀ ಮಣಿಹಾರ, ಕವಿತಾಗುಣಾರ್ಣವ, ಆದಿಕವಿ, ಕನ್ನಡ ಕಾವ್ಯಗಳ ಜನಕ, ನಾಡೋಜ, ನೂತನ ಯುಗ ಪ್ರವರ್ತಕ.
  • "ಏಂ ಕಲಿಯೋ, ಸತ್ಕವಿಯೋ ಕವಿತಾಗುಣಾರ್ಣಭವಂ"ಎಂದು ಪಂಪನನ್ನು ಹೊಗಳಿದ್ದಾರೆ. "ಪಸರಿಪ ಕನ್ನಡಕ್ಕೋರ್ವನೇ ಸತ್ಕವಿ ಪಂಪನಾವಗಂ" ಎಂದು ನಾಗರಾಜ ಕವಿಯು ಪಂಪನನ್ನು ಹೊಗಳಿದ್ದಾನೆ.

ಕವಿ ಸಂದೇಶ:

  • 'ಧರ್ಮಂ ಪ್ರಧಾನಂ ಅರ್ಥಂ ಧರ್ಮಾಂಘ್ರಿಪಫಳಂ ಅದರ್ಕ್ಕೆರಸಮದುಕಾಮಂ'- ಇದು ಪಂಪನ ಜೀವನ ದೃಷ್ಟಿ.
  • ಪದ ವಿಭಾಗ:ಧರ್ಮಂ ಪ್ರಧಾನಂ, ಅರ್ಥಂ ಧರ್ಮ ಅಂಘ್ರಿಪ ಫಳಂ, ಅದರ್ಕ್ಕೆ ರಸಮದು ಕಾಮಂ
  • ಅರ್ಥ:ಜೀವನಕ್ಕೆ ಮುಖ್ಯವಾದ ಧರ್ಮ, ಅರ್ಥ,ಕಾಮ, ಇವುಗಳಲ್ಲಿ ಧರ್ಮವು ಎಲ್ಲಕ್ಕೂ ಪ್ರಧಾನವು ಎಂದರೆ ಮುಖ್ಯವು, ಅರ್ಥವು ಎಂದರೆ ಸಂಪತ್ತು ಅಥವಾ ಧನವು, ಅದು ಧರ್ಮವೆಂಬ ಮರದ ಫಲವು/ ಹಣ್ಣು; ಆ ಫಲದ ರಸ ಅಥವಾ ಸಾರವೇ ಕಾಮವು ಎಂದರೆ ಅಗತ್ಯ ಬಯಕೆಗಳ ಈಡೇರಿಕೆ. ಧರ್ಮದಿಂದ ಬಯಕೆಗಳನ್ನು ಈಡೇರಿಸಿಕೊಳ್ಳಬೇಕು ಎಂಬುದು ಭಾವ.

Comments

ALSO READ THIS

ಕವಿ ಪರಿಚಯ - ದ.ರಾ.ಬೇಂದ್ರೆ

ಕವಿ ಪರಿಚಯ - ಕುವೆಂಪು